ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
TSK
TSK · ಅಪೊಸ್ತಲರ ಕೃತ್ಯಗ 19:21
Treasury of Scripture Knowledge references in Kannada KJV.
ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.