TSK

TSK · ಅಪೊಸ್ತಲರ ಕೃತ್ಯಗ 21:14

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.

ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.

ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.