TSK

TSK · ಅಪೊಸ್ತಲರ ಕೃತ್ಯಗ 21:24

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.

ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.

ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.

ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.

ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.

ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.

ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.

ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.