TSK

TSK · ದಾನಿಯೇಲನು 2:45

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.

ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.

ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.

ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.

ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.

ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.

ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?

ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.

ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.

ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,