TSK

TSK · ದಾನಿಯೇಲನು 9:5

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ

ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.

ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.

ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.

ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.

ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.

ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.

ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.

ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.

ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.