ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
TSK
TSK · ವಿಮೋಚನಕಾಂಡ 3:21
Treasury of Scripture Knowledge references in Kannada KJV.
ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.