TSK

TSK · ಆದಿಕಾಂಡ 18:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.

ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.

ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.

ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.

ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.

ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.

ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.

ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;