ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
TSK
TSK · ಆದಿಕಾಂಡ 21:14
Treasury of Scripture Knowledge references in Kannada KJV.
ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.