ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
TSK
TSK · ಆದಿಕಾಂಡ 21:17
Treasury of Scripture Knowledge references in Kannada KJV.
ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು