TSK

TSK · ಆದಿಕಾಂಡ 42:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.

ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.

ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;

ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.

ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.

ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.

ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.

ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.