ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
TSK
TSK · ಆದಿಕಾಂಡ 48:21
Treasury of Scripture Knowledge references in Kannada KJV.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು.
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.