ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
TSK
TSK · ಆದಿಕಾಂಡ 8:21
Treasury of Scripture Knowledge references in Kannada KJV.
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.