ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
TSK
TSK · ಯೋಹಾನನು 17:21
Treasury of Scripture Knowledge references in Kannada KJV.
ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.