ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
TSK
TSK · ಯೋಹಾನನು 21:15
Treasury of Scripture Knowledge references in Kannada KJV.
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.