TSK

TSK · ಯೋಹಾನನು 21:17

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.

ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.

ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.

ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.

ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.

ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.

ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.

ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.

ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.

ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.

ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.

ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.

ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.

ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.

ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.