ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
TSK
TSK · ಯೋಹಾನನು 7:39
Treasury of Scripture Knowledge references in Kannada KJV.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.