ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
TSK
TSK · ಯಾಜಕಕಾಂಡ 21:6
Treasury of Scripture Knowledge references in Kannada KJV.
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.