TSK

TSK · ಯಾಜಕಕಾಂಡ 27:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.

ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.

ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿ

ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.