ಯೆಹೋಶುವ 6:19
TSK
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
TSK
Treasury of Scripture Knowledge references in Kannada KJV.
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.