ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
TSK
TSK · ಲೂಕನು 6:21
Treasury of Scripture Knowledge references in Kannada KJV.
ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು
ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ಯೇಸು ಅತ್ತನು.
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.