ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
TSK
TSK · ಮಾರ್ಕನು 10:21
Treasury of Scripture Knowledge references in Kannada KJV.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು