ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
TSK
TSK · ಮಾರ್ಕನು 13:11
Treasury of Scripture Knowledge references in Kannada KJV.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.