ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
TSK
TSK · ಮಾರ್ಕನು 13:14
Treasury of Scripture Knowledge references in Kannada KJV.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.