ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
TSK
TSK · ಮಾರ್ಕನು 13:7
Treasury of Scripture Knowledge references in Kannada KJV.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.