TSK

TSK · ಮತ್ತಾಯನು 7:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.

ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.

ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.

ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.

ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.

ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.

ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.

ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.

ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.

ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?

ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.

ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.