ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
TSK
TSK · ಙ್ಞಾನೋಕ್ತಿಗಳು 1:23
Treasury of Scripture Knowledge references in Kannada KJV.
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.