ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
TSK
TSK · ಙ್ಞಾನೋಕ್ತಿಗಳು 10:21
Treasury of Scripture Knowledge references in Kannada KJV.
ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.