ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
TSK
TSK · ಙ್ಞಾನೋಕ್ತಿಗಳು 10:25
Treasury of Scripture Knowledge references in Kannada KJV.
ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.