TSK

TSK · ಙ್ಞಾನೋಕ್ತಿಗಳು 14:17

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.

ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,

ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.

ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.

ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.

ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.