ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
TSK
TSK · ಙ್ಞಾನೋಕ್ತಿಗಳು 15:28
Treasury of Scripture Knowledge references in Kannada KJV.
ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;