ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
TSK
TSK · ಙ್ಞಾನೋಕ್ತಿಗಳು 16:19
Treasury of Scripture Knowledge references in Kannada KJV.
ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;