ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
TSK
TSK · ಙ್ಞಾನೋಕ್ತಿಗಳು 17:23
Treasury of Scripture Knowledge references in Kannada KJV.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.