ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
TSK
TSK · ಙ್ಞಾನೋಕ್ತಿಗಳು 18:12
Treasury of Scripture Knowledge references in Kannada KJV.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.