TSK

TSK · ಙ್ಞಾನೋಕ್ತಿಗಳು 19:12

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.

ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.

ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?

ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.

ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.