ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
TSK
TSK · ಙ್ಞಾನೋಕ್ತಿಗಳು 19:16
Treasury of Scripture Knowledge references in Kannada KJV.
ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.