ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
TSK
TSK · ಙ್ಞಾನೋಕ್ತಿಗಳು 19:21
Treasury of Scripture Knowledge references in Kannada KJV.
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.
ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ