ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
TSK
TSK · ಙ್ಞಾನೋಕ್ತಿಗಳು 2:13
Treasury of Scripture Knowledge references in Kannada KJV.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.