ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
TSK
TSK · ಙ್ಞಾನೋಕ್ತಿಗಳು 20:22
Treasury of Scripture Knowledge references in Kannada KJV.
ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.