¶ ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
TSK
TSK · ಙ್ಞಾನೋಕ್ತಿಗಳು 20:7
Treasury of Scripture Knowledge references in Kannada KJV.
ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.