ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
TSK
TSK · ಙ್ಞಾನೋಕ್ತಿಗಳು 21:1
Treasury of Scripture Knowledge references in Kannada KJV.
¶ ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.