ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
TSK
TSK · ಙ್ಞಾನೋಕ್ತಿಗಳು 21:13
Treasury of Scripture Knowledge references in Kannada KJV.
ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.