ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
TSK
TSK · ಙ್ಞಾನೋಕ್ತಿಗಳು 21:4
Treasury of Scripture Knowledge references in Kannada KJV.
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.