TSK

TSK · ಙ್ಞಾನೋಕ್ತಿಗಳು 21:6

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.

ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.

ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.