TSK

TSK · ಙ್ಞಾನೋಕ್ತಿಗಳು 21:8

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?

ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.

ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.

ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.

ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.

ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.