ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
TSK
TSK · ಙ್ಞಾನೋಕ್ತಿಗಳು 22:23
Treasury of Scripture Knowledge references in Kannada KJV.
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.