TSK

TSK · ಙ್ಞಾನೋಕ್ತಿಗಳು 22:29

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.

ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.

ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.

ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.

ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.

ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.