ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
TSK
TSK · ಙ್ಞಾನೋಕ್ತಿಗಳು 23:20
Treasury of Scripture Knowledge references in Kannada KJV.
ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.