ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
TSK
TSK · ಙ್ಞಾನೋಕ್ತಿಗಳು 23:34
Treasury of Scripture Knowledge references in Kannada KJV.
ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.