ಎಸ್ತೇರಳು 7:10
TSK
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
TSK
Treasury of Scripture Knowledge references in Kannada KJV.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.