TSK

TSK · ಙ್ಞಾನೋಕ್ತಿಗಳು 27:18

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;

ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.

ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.

ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.

ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.

ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.

ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.

ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?

ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.

ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.